ಎಂ.ಆರ್.ವಿಠಲ್
From Wikipedia
ಕನ್ನಡ ಚಿತ್ರರಂಗದ ನಿರ್ದೇಶಕರಲ್ಲಿ ಪ್ರಮುಖ ಹೆಸರಾದ ಮೈಸೂರು ರಾಘವೇಂದ್ರರಾವ್ ವಿಠಲ್ ೧೯೦೮ ಆಗಸ್ಟ್೧೯ರಂದು ಜನಿಸಿದರು. ಮೈಸೂರು ಮತ್ತು ಮದ್ರಾಸುಗಳಲ್ಲಿವ್ಯಾಸಂಗ ನಡೆಸಿದರು. ಆಟೋಮೊಬೈಲ್ ಮತ್ತು ಇಂಜಿನಿಯರಿಂಗ್ ಪದವೀಧರರಾದ ವಿಠಲ್ ಆ ಕ್ಷೇತ್ರದಲ್ಲಿಪ್ರಾಧ್ಯಾಪಕರಾಗಿಯೂ ಹೆಸರು ಮಾಡಿದರು. ೧೯೨೮ರರಲ್ಲಿ ಕೊಲ್ಲಾಪುರದಲ್ಲಿ ಸ್ವಂತ ಕಾಲೇಜನ್ನು ಆರಂಭಿಸಿದರು. ಈ ಸಂದರ್ಭದಲ್ಲಿ ಅವರಿಗೆ ಧ್ವನಿಗ್ರಹಣದ ಬಗ್ಗೆ ಆಸಕ್ತಿ ಬೆಳೆಯಿತು. ಭಾರತೀಯ ಚಿತ್ರರಂಗದ ಪಿತಾಮಹ ದಾದಾ ಸಾಹೇಬ್ ಫಾಲ್ಕೆ ಅವರ ಬಳಿ ಚಲನಚಿತ್ರ ಕಲೆಯನ್ನು ಕಲಿತ ಅವರು ಲಾಹೊರ್ಗೆ ತೆರಳಿ ಶಬ್ದ ಗ್ರಹಣವನ್ನು ವಿಶೇಷವಾಗಿ ಅಧ್ಯಯನ ಮಾಡಿದರು.
೧೯೩೮ ರಲ್ಲಿ ಆಗ್ ಎಂಬ ಹಿಂದಿ ಚಿತ್ರವನ್ನು ನಿರ್ದೇಶಿಸಿದರು. ಹಲವಾರು ತಮಿಳು ಮತ್ತು ಮಲೆಯಾಳಂ ಚಿತ್ರಗಳನ್ನು ನಿರ್ದೇಶಿಸಿದರು. ೧೯೫೨ ರಲ್ಲಿ ಬರ್ನಿಂಗ್ ಸಿಟಿ ಎಂಬ ಫ್ರೆಂಚ್ ಭಾಷೆಯ ಚಿತ್ರವನ್ನು ನಿರ್ದೇಶಿಸಿದರು. ವಿಠಲ್ ಕನ್ನಡ ಚಿತ್ರ್ರರಂಗಕ್ಕೆ ಬಂದಿದ್ದು ತಡವಾಗಿ. ಆದರೆ ಕನ್ನಡದಲ್ಲಿ ಅನೇಕ ಹೊಸ ಅಲೆಯ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ೧೯೬೩ರಲ್ಲಿ ವಾದಿರಾಜ್ ಮತ್ತು ಜವಾಹರ್ ನಿರ್ಮಾಣದ ನಂದಾದೀಪ ಚಿತ್ರದ ಮೂಲಕ ಕನ್ನಡ ಚಿತ್ರರಂಗವನ್ನು ಪ್ರವೇಶಿಸಿದರು.
ನಕ್ಕರೆ ಅದೇ ಸ್ವರ್ಗ ಚಿತ್ರದ ಮೂಲಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರನ್ನೂ, ಯಾರು ಸಾಕ್ಷಿ ಚಿತ್ರದ ಮೂಲಕ ನಟಿ ಮಂಜುಳ ಅವರನ್ನು ಬೆಳ್ಳಿತೆರೆಗೆ ಪರಿಚಯಿಸಿದ ಹೆಗ್ಗಳಿಕೆ ವಿಠಲ್ ಅವರದು .
[ಬದಲಾಯಿಸಿ] ಎಂ.ಆರ್.ವಿಠಲ್ ನಿರ್ದೇಶನದ ಕನ್ನಡ ಚಿತ್ರಗಳು
[ಬದಲಾಯಿಸಿ] ಪ್ರಶಸ್ತಿ
೧೯೯೧ ನೆಯ ಸಾಲಿನ ಪ್ರತಿಷ್ಠಿತ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಪಡೆದಿದ್ದರು.
[ಬದಲಾಯಿಸಿ] ನಿಧನ
ತಮ್ಮ ಜೀವನದ ಕೊನೆಯ ದಿನಗಳನ್ನು ಬರೋಡಾದಲ್ಲಿ ಕಳೆದ ವಿಠಲ್ ೧೯೯೪ರ ಅಕ್ಟೋಬರ್ ೧೨ ರಂದು ನಿಧನರಾದರು.
ಕನ್ನಡ ಚಲನಚಿತ್ರ ನಿರ್ದೇಶಕರು
ವೈ.ವಿ.ರಾವ್ | ಎಂ.ಆರ್.ವಿಠಲ್ | ಹೆಚ್.ಎಲ್.ಎನ್ ಸಿಂಹ | ಡಿ.ಶಂಕರ್ ಸಿಂಗ್ | ಬಿ.ಆರ್.ಪಂತುಲು | ಕಣಗಾಲ್ ಪ್ರಭಾಕರ ಶಾಸ್ತ್ರಿ | ಜಿ.ವಿ.ಅಯ್ಯರ್ | ಆರ್.ನಾಗೇಂದ್ರರಾಯ | ಬಿ.ಎಸ್.ರಂಗಾ | ಆರ್.ಎನ್.ಜಯಗೋಪಾಲ್ | ಗೀತಪ್ರಿಯ | ಹುಣಸೂರು ಕೃಷ್ಣಮೂರ್ತಿ | ಆರೂರು ಪಟ್ಟಾಭಿ | ಸಿದ್ಧಲಿಂಗಯ್ಯ | ಪುಟ್ಟಣ್ಣ ಕಣಗಾಲ್ | ಗಿರೀಶ್ ಕಾರ್ನಾಡ್ | ಎಂ.ಎಸ್.ರಾಜಶೇಖರ್ | ಬಿ ವಿ ಕಾರ೦ತ | ಪ್ರೇಮಾ ಕಾರಂತ | ಗಿರೀಶ್ ಕಾಸರವಳ್ಳಿ | ನಾಗತಿಹಳ್ಳಿ ಚಂದ್ರಶೇಖರ್ | ನಾಗಾಭರಣ | ಟಿ. ಪಟ್ಟಾಭಿರಾಮ ರೆಡ್ಡಿ | ಸುರೇಶ್ ಹೆಬ್ಳಿಕರ್ | ಭಾರ್ಗವ | ರಾಜೇಂದ್ರಸಿಂಗ್ ಬಾಬು | ಡಿ.ರಾಜೇಂದ್ರ ಬಾಬು | ದೊರೈ-ಭಗವಾನ್ | ಎನ್. ಲಕ್ಷ್ಮಿ ನಾರಾಯಣ್ | ಕೆ.ಎಸ್.ಎಲ್.ಸ್ವಾಮಿ(ರವೀ) | ತಿಪಟೂರು ರಘು | ಕೆ.ಬಾಲಚಂದರ್ | ಮಣಿರತ್ನಂ | ಶಂಕರ್ ನಾಗ್ | ಸಿಂಗೀತಂ ಶ್ರೀನಿವಾಸ ರಾವ್ | ಜೋಸೈಮನ್ | ರಮೇಶ್ ಭಟ್ | ರವಿಚಂದ್ರನ್ | ಕಾಶೀನಾಥ್ | ಫಣಿ ರಾಮಚಂದ್ರ | ಪಿ.ಹೆಚ್.ವಿಶ್ವನಾಥ್ | ಎಸ್.ನಾರಾಯಣ್ | ಓಂಪ್ರಕಾಶ್ ರಾವ್ | ಉಪೇಂದ್ರ | ಸುನೀಲ್ ಕುಮಾರ್ ದೇಸಾಯಿ | ಪ್ರೇಂ | ಮಹೇಂದರ್ | ಓಂ ಸಾಯಿಪ್ರಕಾಶ್ | ವಿ.ಮನೋಹರ್ | ಸುದೀಪ್ | ರಮೇಶ್ | ಮಾ.ಕಿಶನ್ | ಕವಿತಾ ಲಂಕೇಶ್| ಪಿ ಲಂಕೇಶ್ | ಇಂದ್ರಜಿತ್ ಲಂಕೇಶ್ | ರವಿ ಶ್ರೀವತ್ಸ | ಜಯಂತಿ | ಆರತಿ | ಲಕ್ಷ್ಮಿ | ಲೋಕೇಶ್ | ಟಿ.ವಿ.ಸಿಂಗ್ ಠಾಕೂರ್