ಎ.ಎನ್.ಮೂರ್ತಿರಾವ್
Wikipedia ಇಂದ
ಡಾ. ಎ.ಎನ್.ಮೂರ್ತಿ ರಾವ್ (ಅಕ್ಕಿ ಹೆಬ್ಬಾಳು ನರಸಿಂಹಮೂರ್ತಿರಾಯರು) (ಜೂನ್. ೧೬ ೧೯೦೦ - ೨೪ ಆಗಸ್ಟ್ ೨೦೦೫)- ಕನ್ನಡದ ಖ್ಯಾತ ವಿಮರ್ಶಕ ಮತ್ತು ಸಾಹಿತಿ. ಬರಿಯ ಶತಾಯುಷಿಯಷ್ಟೇ ಅಲ್ಲದೇ, ಮೂರು ಶತಮಾನಗಳಲ್ಲಿ ( ೧೯,೨೦,೨೧ನೆಯ ಶತಮಾನಗಳು) ಬದುಕಿದ ಅತ್ಯಂತ ಅಪರೂಪದ ವ್ಯಕ್ತಿ.
ಮಂಡ್ಯ ಜಿಲ್ಲೆಯ "ಅಕ್ಕಿಹೆಬ್ಬಾಳು", ಅವರ ಜನ್ಮಸ್ಥಳ.
ತಂದೆ-ತಾಯಿಗಳು : ಶ್ರೀಮತಿ ಪುಟ್ಟಮ್ಮ, ಮತ್ತು ತಂದೆಯವರು, ಶ್ರೀ ಎ. ಸುಬ್ಬರಾವ್.
ಹೆಂಡತಿ- ಶ್ರೀಮತಿ ಜಯಲಕ್ಷ್ಮಿ, (ಮೂರ್ತಿರಾಯರ ರಚನೆಗಳಲ್ಲಿ 'ಲಲಿತೆ,' ಯೆಂದು ಸಂಬೋಧಿಸಲ್ಪಡುತ್ತಾರೆ.)
ಮಕ್ಕಳು : ೧. ಎ. ಎನ್. ಸುಬ್ಬರಾಮಯ್ಯ,೨. ಎ. ಎನ್. ನಾಗರಾಜ್,೩. ಎ. ಎನ್ ರಾಮಚಂದ್ರರಾವ್
ಪರಿವಿಡಿ |
[ಬದಲಾಯಿಸಿ] ವಿದ್ಯಾಭ್ಯಾಸ :
ಮೈಸೂರಿನ ವೆಸ್ಲಿಯನ್ ಮಿಷನ್ ಹೈಸ್ಕೂಲುಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಎಂ. ಎ ; (ಇಂಗ್ಲೀಷ್ ಸಾಹಿತ್ಯದಲ್ಲಿ)
[ಬದಲಾಯಿಸಿ] ವೃತ್ತಿ :
೧. ಮೈಸೂರಿನ ಮಹಾರಾಜಾ ಹೈಸ್ಕೂಲಿನಲ್ಲಿ ಉಪಾಧ್ಯಾಯವೃತ್ತಿ- ೧೯೨೫-೧೯೨೭ ೨. ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಅಧ್ಯಾಪಕ-೧೯೨೭-೧೯೪೦ ೩. ಶಿವಮೊಗ್ಗದ ಇಂಟರ್ಮೀಡಿಯೆಟ್ ಕಾಲೇಜಿನಲ್ಲಿ ಉಪಪ್ರಾಧ್ಯಾಪಕ-೧೯೪೦-೧೯೪೩
[ಬದಲಾಯಿಸಿ] ಗೌರವಕೆಲಸಗಳು :
೧. ಕಾರ್ಯದರ್ಶಿ, ಕನ್ನಡಸಾಹಿತ್ಯ ಪರಿಷತ್ತು-೧೯೫೪ ೨. ಅಧ್ಯಕ್ಷ, ಕನ್ನಡ ಸಾಹಿತ್ಯ ಪರಿಷತ್ತು-೧೯೫೪-೫೬ ೩. ಕೇಂದ್ರ ಸಾಹಿತ್ಯ ಅಕ್ಯಾಡಮಿಯ ಕನ್ನಡ ಸಲಹ ಸಮಿತಿಯ ಕನ್ವೀನರ್ ಛೇರ್ಮನ್ ೪. ದಕ್ಷಿಣ ಭಾಷಾ ಪುಸ್ತಕ ಟ್ರಸ್ಟ್ ನ ಕನ್ನಡ ಕನ್ವೀನರ್- ಛೇರ್ಮನ್ ೫. ಭಾರತೀಯ ಆಕಾಶ್ ವಾಣಿ ಯ 'ಕೇಂದ್ರೀಯ ಕಾರ್ಯಕ್ರಮಗಳ ಸಲಹಾಕಮಿಟಿ', ಯ ಸದಸ್ಯರಾಗಿ ೪ ವರ್ಷಗಳಕಾಲ ಸೇವೆ.
ಪ್ರಬಂಧಗಳ ಮೂಲಕ ಇವರು ಕನ್ನಡ ಸಾಹಿತ್ಯಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ. ೧೯೩೭ರಲ್ಲಿ ಇವರ ಮೊದಲ ಕೃತಿ "ಹೂವುಗಳು"(ಪ್ರಬಂಧ ಸಂಕಲನ) ಪ್ರಕಟವಾಯಿತು. ಎಂಟು ಪ್ರಬಂಧಗಳ ಈ ಸಂಕಲನವು ಇಂದಿಗೂ ಒಂದು ಮಾದರಿ ಕೃತಿಯಾಗಿದೆ. ವೈಚಾರಿಕ ನಾಸ್ತಿಕವಾದಿಯಾದ ರಾಯರ "ದೇವರು" ಎಂಬ ಕೃತಿಯು ಆಂಗ್ಲ ಭಾಷೆಗೆ ತರ್ಜುಮೆಯಾಗಿ ವಿಶ್ವಪ್ರಸಿಧ್ಧವಾಗಿದೆ.
[ಬದಲಾಯಿಸಿ] ಕನ್ನಡ ಕೃತಿಗಳು
[ಬದಲಾಯಿಸಿ] ಅನುವಾದಗಳು
- ಸಾಕ್ರೆಟೀಸನ ಕೊನೆಯ ದಿನಗಳು ( ಪ್ಲೇಟೋನ 'Enthyphro','Crito',Apology',Phaedo' - ಸಂವಾದಗಳ ಅನುವಾದ)
- ಹವಳದ ದ್ವೀಪ ( ಆರ.ಎಂ.ಬ್ಯಾಲಂಟಯಿನ್ ನ 'The Coral Island' ನ ಸಂಗ್ರಹಾನುವಾದ)
- ಯೋಧನ ಪುನರಾಗಮನ ( ಅನುವಾದಿತ ಕಥೆಗಳು)
- ಪಾಶ್ಚಾತ್ಯ ಸಣ್ಣ ಕಥೆಗಳು ( ಅನುವಾದಿತ ಕಥೆಗಳು)
- ಅಮೆರಿಕನ್ ಸಾಹಿತ್ಯ ಚರಿತ್ರೆ
- ಇಂಡಿಯ, ಇಂದು ಮತ್ತು ನಾಳೆ ( ಜವಹರಲಾಲ್ ನೆಹರೂರ 'India Today and Tomorrow' ಪುಸ್ತಕದ ಅನುವಾದ)
- ಚಂಡಮಾರುತ (ಷೇಕ್ ಸ್ಪಿಯರ್ ನ 'The Tempest' ಅನುವಾದ)
[ಬದಲಾಯಿಸಿ] ಲಲಿತ ಪ್ರಬಂಧಗಳು
- ಹಗಲುಗನಸುಗಳು
- ಮಿನುಗು ಮಿಂಚು
- ಅಲೆಯುವ ಮನ
- ಜನತಾ ಜನಾರ್ದನ
- ಸಮಗ್ರ ಲಲಿತ ಪ್ರಬಂಧಗಳು
- ಸಮಗ್ರ ಲಲಿತ ಪ್ರಬಂಧಗಳು (ವಿಸ್ತ್ರತ ಆವೃತ್ತಿ)
[ಬದಲಾಯಿಸಿ] ರೂಪಾಂತರಗಳು
- ಆಷಾಢಭೂತಿ ( ಮೋಲಿಯರನ 'ತಾರ್ತುಫ್' ನಾಟಕದ ರೂಪಾಂತರ)
[ಬದಲಾಯಿಸಿ] ವಿಮರ್ಶೆ
- ಷೇಕ್ ಸ್ಪಿಯರ್ - ಪೂರ್ವಭಾಗ
- ಮಾಸ್ತಿಯವರ ಕಥೆಗಳು
- ಪೂರ್ವ ಸೂರಿಗಳೊಡನೆ
- ಸಾಹಿತ್ಯ ಮತ್ತು ಸತ್ಯ
- ವಿಮರ್ಶಾತ್ಮಕ ಪ್ರಬಂಧಗಳು,
[ಬದಲಾಯಿಸಿ] ಇತರ
- ಚಿತ್ರಗಳು ಪತ್ರಗಳು
- ಬಿ.ಎಂ.ಶ್ರೀಕಂಠಯ್ಯ (ವಿಮರ್ಶಾತ್ಮಕ ಜೀವನ ಚರಿತ್ರೆ)
- ಅಪರವಯಸ್ಕನ ಅಮೆರಿಕಾ ಯಾತ್ರೆ (ಪ್ರವಾಸ ಕಥನ)
- ಸಂಜೆಗಣ್ಣಿನ ಹಿನ್ನೋಟ ( ಆತ್ಮಚರಿತ್ರೆ)
- ದೇವರು ( ವಿಚಾರ)
- ಜನತಾ ಜನಾರ್ದನ ( ಲೇಖನಗಳು)
- ಗಾನ ವಿಹಾರ ( ಲೇಖನಗಳು)
- ಮಹಾಭಾರತದಲ್ಲಿ ಕೇಡು ಎಂಬುದರ ಸಮಸ್ಯೆ
[ಬದಲಾಯಿಸಿ] ಪುರಸ್ಕಾರಗಳು
೧೯೭೪ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
೧೯೭೭ ಮೈಸೂರು ವಿಶ್ವವಿದ್ಯಾನಿಲಯದ ಗೌರವ ಡಿ.ಲಿಟ್.
೧೯೭೮ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (ಅಪರವಯಸ್ಕನ ಅಮೆರಿಕಾ ಯಾತ್ರೆ)
೧೯೭೯ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ( ಚಿತ್ರಗಳು ಪತ್ರಗಳು)
೧೯೮೧ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (ಚಂಡಮಾರುತ)
೧೯೮೪ ಅಧ್ಯಕ್ಷ ಪದ- ಕೈವಾರದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
೧೯೮೪ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
೧೯೯೪ ಪಂಪ ಪ್ರಶಸ್ತಿ
೧೯೯೯ ಮಾಸ್ತಿ ಪ್ರಶಸ್ತಿ
೧೯೯೯ ಭಾರತೀಯ ವಿದ್ಯಾ ಭವನದ ಫೆಲೋಶಿಪ್