ಕೃಷ್ಣ ಮಠ
Wikipedia ಇಂದ
ಕೃಷ್ಣ ಮಠ - ಕರ್ನಾಟಕದ ಪ್ರಸಿದ್ಧ ಯಾತ್ರಾಸ್ಥಳಗಳಲ್ಲಿ ಒಂದಾದ ಉಡುಪಿಯಲ್ಲಿದೆ. ಇಲ್ಲಿರುವ ಶ್ರೀ ಕೃಷ್ಣನ ದೇವಾಲಯವನ್ನೇ ಕೃಷ್ಣ ಮಠ ಎಂದು ಕರೆಯಲಾಗುತ್ತದೆ. ಇಲ್ಲಿರುವ ಕೃಷ್ಣನ ಪ್ರತಿಮೆಯನ್ನು ಶ್ರೀ ಮಧ್ವಾಚಾರ್ಯರು ಸ್ಥಾಪಿಸಿದರು.
ಈ ದೇವಾಲಯದ ಪೂಜೆಯನ್ನು ಉಡುಪಿಯಲ್ಲಿರುವ ಅಷ್ಟ ಮಠಗಳು ನೋಡಿಕೊಳ್ಳುತ್ತವೆ. ಪ್ರತಿ ಎರದು ವರ್ಷಗಳಿಗೊಮ್ಮೆ ಒಂದು ಮಠದಿಂದ ಇನ್ನೊಂದು ಮಠಕ್ಕೆ ಕೃಷ್ಣ ಮಠದ ಪೂಜೆ ಹಸ್ತಾಂತರವಾಗುತ್ತದೆ. ಈ ಸಂದರ್ಭವನ್ನು ಪರ್ಯಾಯ ಮಹೋತ್ಸವ ಎಂದು ಅತಿ ವೈಭವದಿಂದ ಆಚರಿಸಲಾಗುತ್ತದೆ. ಜನವರಿ ೧೮ರ ಬೆಳಗ್ಗೆ ನಡೆಯುವ ಈ ಉತ್ಸವವನ್ನು ಮೈಸೂರಿನ ದಸರ ಹಬ್ಬದ ಮಾದರಿಯಲ್ಲಿ ವಿಜ್ರಂಭಣೆಯಿಂದ ಆಚರಿಸಲಾಗುವುದು. ಒಮ್ಮೆ ಪರ್ಯಾಯ ಪೂರೈಸಿದ ಮಠಕ್ಕೆ,ಮತ್ತೊಮ್ಮೆ ಕೃಷ್ಣ ಮಠ ಪೂಜೆಯ ಅಧಿಕಾರ ಸಿಗಲು ಹದಿನಾಲ್ಕು (೧೪) ವರ್ಷಗಳು ಹಿಡಿಯುತ್ತವೆ. ಶ್ರೀ ಮಧ್ವಾಚಾರ್ಯರು ಪ್ರಾರಂಭಿಸಿದ ಈ ಪದ್ಧತಿ ಇವತ್ತಿನವರೆಗೂ ಚಾಚೂ ತಪ್ಪದೆ ಮುಂದುವರೆದುಕೊಂಡು ಬಂದಿದೆ.
ಕೃಷ್ಣ ಮಠದ ಪ್ರಾಂಗಣದಲ್ಲಿ ಮುಖ್ಯಪ್ರಾಣ, ಗರುಡ, ಸುಬ್ರಹ್ಮಣ್ಯ ಮತ್ತು ನವಗ್ರಹ ಗುಡಿಗಳಿವೆ.